July 23, 2026
Uncategorized

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

ಬೆಂಗಳೂರು: ಅನುದಾನ ಹಂಚಿಕೆಯ ಪಟ್ಟಿಯನ್ನು ನೋಡಿದಾಗ ಕರಾವಳಿ ಜಿಲ್ಲೆಗಳಿಗೆ ರಾಜ್ಯ ಸರ್ಕಾರ ತೀವ್ರ ಅನ್ಯಾಯ ಮಾಡಿದೆ. ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ ಎಂದು ಶಾಸಕ ಹರೀಶ್ ಪೂಂಜಾ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ಈ ಸಲ ಸುರಿದ ಮಳೆಗೆ ಕರಾವಳಿ ಜಿಲ್ಲೆಗಳ ರಸ್ತೆಗಳು ವಾಹನ ಸಂಚರಿಸಲು ಆಗದಷ್ಟು ಹದಗೆಟ್ಟು ಹೋಗಿವೆ. ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಲ್ಲಿ ಅನುದಾನ ಹಂಚಿಕೆಯಲ್ಲಿ ತೀವ್ರ ಅನ್ಯಾಯ ಆಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳು ಅತಿವೃಷ್ಟಿಯಾಗುವ ಜಿಲ್ಲೆಗಳಾಗಿವೆ. ಆದರೆ, ಬೇರೆ ಜಿಲ್ಲೆಗಳಿಗೆ ಪ್ಯಾಕೇಜ್ ನೀಡಲಾಗಿದೆ. 371-ಜೆ ಮತ್ತು ನಂಜುಂಡಪ್ಪ ವರದಿ ಪ್ರಕಾರ ಎಲ್ಲಾ ಜಿಲ್ಲೆಗಳನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗಬೇಕು. ಅತ್ಯಂತ ಹೆಚ್ಚು ಮಳೆ ಬೀಳುವ ಕರಾವಳಿ ಜಿಲ್ಲೆಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದು ಸರಕಾರ ಗಮನಹರಿಸಬೇಕು.

ಈ ಕೂಡಲೇ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಅವರು ಮನವಿ ಮಾಡಿದರು

Related posts

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya
error: Content is protected !!