23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

ಕೊಯ್ಯೂರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರ್ ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 37 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮಹಾಸಭೆಯು ಗಣೇಶೋತ್ಸವ ಸಮಿತಿಯ ಹಿಂದಿನ ಅಧ್ಯಕ್ಷ ವಿನಯ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಹಾಗೂ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು.


ಗೌರವ ಅಧ್ಯಕ್ಷರಾಗಿ ವಿನಯ ಕೆ, ಅಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಕಜೆ, ಉಪಾಧ್ಯಕ್ಷರಾಗಿ ಯಶವಂತ ಗೌಡ ಪುರ್ಯಳ ಮತ್ತು ಹೇಮಂತಗೌಡ ನಾಗನೊಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಗೀತಾರಾಮಣ್ಣ ಗೌಡ, ಕಾರ್ಯದರ್ಶಿಗಳಾಗಿ ನಾರಾಯಣ ನಾಯ್ಕ್ ಪುಂಡೈದಡಿ ಮತ್ತು ದಿನೇಶ್ ಗೌಡ ಜಾಲ್ನಪು ಸಲಹೆಗರರಾಗಿ ವಿಜಯ್ ಕುಮಾರ್ ಎಮ್ ಸಮೃದ್ಧಿ ನಿಲಯ, ಕ್ರೀಡಾ ಸಮಿತಿ ಸಂಚಾಲಕರಾಗಿ ದಾಮೋದರ ಗೌಡ ಬೆರ್ಕೆ ಮತ್ತು ಶ್ರೀಮತಿ ಪೂರ್ಣಿಮಾ ಹೇಮಂತಗೌಡ ಜಂಕಿನಡ್ಕ, ಅಲಂಕಾರ ಸಮಿತಿಯ ಸಂಚಾಲಕರಾಗಿ ದಯಾನಂದ ಆಚಾರ್ಯ ಆದರ್ಶ ನಗರ, ಧಾರ್ಮಿಕ ಸಮಿತಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷ ಮತ್ತು ಮಹಿಳಾ ಮಂಡಳಿಯ ಸರ್ವ ಸದಸ್ಯರು, ಆಹ್ವಾನಿತ ಭಜನಾ ಮಂಡಳಿಗಳ ಸಂಚಾಲಕರಾಗಿ ಪಿ ಚಂದ್ರಶೇಖರ ಸಾಲ್ಯಾನ್ ಆದರ್ಶ ನಗರ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕರಾಗಿ ಶೇಖರ ಗೌಡ ಕೋರಿಯಾರು, ಸಹ ಸಂಚಾಲಕರಾಗಿ ಕುಶಾಲಪ್ಪ ನಾಯ್ಕ ಕುಕ್ಕುದಡಿ, ಅನ್ನದಾನ ಸಮಿತಿಯ ಸಂಚಾಲಕರಾಗಿ ರಮೇಶ್ ಗೌಡ ಮೈಂದಕೋಡಿ, ನಾರಾಯಣ ಗೌಡ ನಾಗನೋಡಿ ಹಾಗೂ ಹರ್ಮಾಡಿ ಬಳಗ ಮತ್ತು ಇನ್ನಿತರ ಸಮಿತಿಗಳನ್ನು ರಚಿಸಲಾಯಿತು.


ನಾರಾಯಣ ನಾಯ್ಕ ಸ್ವಾಗತಿಸಿ , ಗೀತಾರಾಮಣ್ಣ ಗೌಡ ವಂದಿಸಿದರು.

Related posts

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!