September 6, 2026
ಆಯ್ಕೆ

ಕೊಯ್ಯೂರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ದೇಜಪ್ಪ ಗೌಡ

ಕೊಯ್ಯೂರು : ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಶ್ರೀ ಕೃಷ್ಣ ಭಜನಾ ಮಂಡಳಿ(ರಿ) ಆದೂರ್ ಪೇರಲ್ ಕೊಯ್ಯೂರು ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ ನಡೆಯುವ 37 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಶ್ರೀ ಗಣೇಶೋತ್ಸವ ಕಾರ್ಯಕ್ರಮದ ಮಹಾಸಭೆಯು ಗಣೇಶೋತ್ಸವ ಸಮಿತಿಯ ಹಿಂದಿನ ಅಧ್ಯಕ್ಷ ವಿನಯ ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಹಾಗೂ ಮುಂದಿನ ಸಾಲಿನ ನೂತನ ಪದಾಧಿಕಾರಿಗಳ ಸಮಿತಿಯನ್ನು ರಚಿಸಲಾಯಿತು.


ಗೌರವ ಅಧ್ಯಕ್ಷರಾಗಿ ವಿನಯ ಕೆ, ಅಧ್ಯಕ್ಷರಾಗಿ ದೇಜಪ್ಪ ಗೌಡ ಬೆಲ್ದೆ, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್ ಕುಮಾರ್ ಕಜೆ, ಉಪಾಧ್ಯಕ್ಷರಾಗಿ ಯಶವಂತ ಗೌಡ ಪುರ್ಯಳ ಮತ್ತು ಹೇಮಂತಗೌಡ ನಾಗನೊಡಿ, ಕೋಶಾಧಿಕಾರಿಯಾಗಿ ಶ್ರೀಮತಿ ಗೀತಾರಾಮಣ್ಣ ಗೌಡ, ಕಾರ್ಯದರ್ಶಿಗಳಾಗಿ ನಾರಾಯಣ ನಾಯ್ಕ್ ಪುಂಡೈದಡಿ ಮತ್ತು ದಿನೇಶ್ ಗೌಡ ಜಾಲ್ನಪು ಸಲಹೆಗರರಾಗಿ ವಿಜಯ್ ಕುಮಾರ್ ಎಮ್ ಸಮೃದ್ಧಿ ನಿಲಯ, ಕ್ರೀಡಾ ಸಮಿತಿ ಸಂಚಾಲಕರಾಗಿ ದಾಮೋದರ ಗೌಡ ಬೆರ್ಕೆ ಮತ್ತು ಶ್ರೀಮತಿ ಪೂರ್ಣಿಮಾ ಹೇಮಂತಗೌಡ ಜಂಕಿನಡ್ಕ, ಅಲಂಕಾರ ಸಮಿತಿಯ ಸಂಚಾಲಕರಾಗಿ ದಯಾನಂದ ಆಚಾರ್ಯ ಆದರ್ಶ ನಗರ, ಧಾರ್ಮಿಕ ಸಮಿತಿ ಶ್ರೀ ಕೃಷ್ಣ ಭಜನಾ ಮಂಡಳಿಯ ಪುರುಷ ಮತ್ತು ಮಹಿಳಾ ಮಂಡಳಿಯ ಸರ್ವ ಸದಸ್ಯರು, ಆಹ್ವಾನಿತ ಭಜನಾ ಮಂಡಳಿಗಳ ಸಂಚಾಲಕರಾಗಿ ಪಿ ಚಂದ್ರಶೇಖರ ಸಾಲ್ಯಾನ್ ಆದರ್ಶ ನಗರ, ಮೆರವಣಿಗೆ ಸಮಿತಿಯ ಪ್ರಧಾನ ಸಂಚಾಲಕರಾಗಿ ಶೇಖರ ಗೌಡ ಕೋರಿಯಾರು, ಸಹ ಸಂಚಾಲಕರಾಗಿ ಕುಶಾಲಪ್ಪ ನಾಯ್ಕ ಕುಕ್ಕುದಡಿ, ಅನ್ನದಾನ ಸಮಿತಿಯ ಸಂಚಾಲಕರಾಗಿ ರಮೇಶ್ ಗೌಡ ಮೈಂದಕೋಡಿ, ನಾರಾಯಣ ಗೌಡ ನಾಗನೋಡಿ ಹಾಗೂ ಹರ್ಮಾಡಿ ಬಳಗ ಮತ್ತು ಇನ್ನಿತರ ಸಮಿತಿಗಳನ್ನು ರಚಿಸಲಾಯಿತು.


ನಾರಾಯಣ ನಾಯ್ಕ ಸ್ವಾಗತಿಸಿ , ಗೀತಾರಾಮಣ್ಣ ಗೌಡ ವಂದಿಸಿದರು.

Related posts

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಆಡಳಿತ ಮಂಡಳಿಯ ನಿರ್ದೇಶಕರಾಗಿ ಹೆಚ್. ಪ್ರಭಾಕರ

Suddi Udaya

ಬೆಳ್ತಂಗಡಿ: ಕಂದಾಯ ನಿರೀಕ್ಷಕರಾಗಿ ಶ್ರೀರಾಜು ಲಮಾಣಿ ನೇಮಕ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾಗಿ ರಹಿಮಾನ್ ಪಡ್ಪು ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!