July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

ಬಾರ್ಯ: ಗ್ರಾಮದ ಸರಳಿಕಟ್ಟೆ ಸರಕಾರಿ ಪ್ರೌಡ ಶಾಲೆಯ ಸಮೀಪ ಖಾನ (ಮಲ್ಲಕಲ್) ಮೆಗಿನ ಪುಯಿಲದಲ್ಲಿ ಸುಮಾರು ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು, ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ತುಂಡಾಗಿ ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ.


ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ಟ್ರಾನ್ಸ್ಫಾರ್ಮ್ ಕಂಬದಲ್ಲಿ ತಂತಿಯೊಂದು ಅದರ ಉಪಕರಣಗಳು ತುಂಡಾಗಿ ವಿದ್ಯುತ್ ತಂತಿಯು ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ. ವಿದ್ಯುತ್ ಕಂಬದ ಹತ್ತಿರದಲ್ಲಿ ಮನೆಗಳು ಇರುವುದರಿಂದ ಅನಾಹುತ ನಡೆಯುವ ಸಂಭವವಿದೆ. ಶೀಘ್ರದಲ್ಲಿ ದುರಸ್ತಿ ಕಾರ್ಯ ಮಾಡಿದರೆ ಅನಾಹುತ ತಪ್ಪಬಹುದು. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿದ್ದಾರೆ.

Related posts

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಮಹಿಳಾ ಸಮಾಜ ವತಿಯಿಂದ ಯಕ್ಷಗಾನ ಶೈಲಿಯ ಕಾವ್ಯವಾಚನ- ಪ್ರವಚನ ವೈಭವದ ಶ್ರೀಜಿನ ಶಾಂತಿನಾಥ ಚರಿತೆ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

Suddi Udaya
error: Content is protected !!