27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಬೆಳಾಲು : ನೇತ್ರ ವೈದ್ಯರ ನಡೆ ಪಂಚಾಯತ್ ಕಡೆ ಎಂಬ ಯೋಜನೆಯಡಿಯಲ್ಲಿ ಗ್ರಾಮ ಪಂಚಾಯತ್ ಬೆಳಾಲು ,ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಬೆಳಾಲು ಹಾಗೂ ಇನ್ನಿತರ ಸಂಘ ಸಂಸ್ಥೆಗಳ ಸoಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವು ಜು.21 ರಂದು ಬೆಳಾಲು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ರವರು ನಡೆಸಿಕೊಟ್ಟರು. ಸುಮಾರು 120 ಕ್ಕೂ ಹೆಚ್ಚು ಜನರ ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು.

ಶಿಬಿರದ ನಿರ್ದೇಶಕರಾದ ಮುರಳಿಧರ ಸಿ ಎಚ್ ಇವರು ಕಾರ್ಯಕ್ರಮವನ್ನು ಸಂಯೋಜಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಸೇವಾ ಸಹಕಾರಿ ಬ್ಯಾಂಕಿನ ಮ್ಯಾನೇಜರ್, ಪಂಚಾಯತ್ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಿಬ್ಬಂದಿಗಳು, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ವೈದ್ಯಾಧಿಕಾರಿಗಳು, ಆರೋಗ್ಯ ಇಲಾಖೆಯವರು, ಗ್ರಾಮ ಅಭಿವೃದ್ಧಿ ಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜೊತೆಗೆ ಆರ್ಥಿಕ ಸಾಕ್ಷರತಾ ಸಮಾಲೋಚಕಿ ಉಷಾ ಕಾಮತ್ ರವರು ಪ್ರಧಾನ ಮಂತ್ರಿ ಜನ ಸುರಕ್ಷಾ ವಿಮೆಯ ಸೌಲಭ್ಯದ ಬಗ್ಗೆ ಮಾಹಿತಿ ನೀಡಿ ವಿಮೆ ಮಾಡಿಸಿದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಕಾಳಜಿಯ ಯಶಸ್ವೀ ಪ್ರಯೋಗಗಳು

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!