ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುವ 25 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಭೆಯು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರುಗಳಾದ ಚಂದ್ರಶೇಖರ ಕಾಂಜಾನು ಹಾಗೂ ವಿಜಯ ಕೆ ಹೊಡಿಕ್ಕಾರು ಇವರ ಜಂಟಿ ಅಧ್ಯಕ್ಷತೆಯಲ್ಲಿ ಜು.21 ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು.

25ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಅಧ್ಯಕ್ಷರಾಗಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬೆಳ್ಳೂರು ಗುತ್ತು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಗೌರವ ಅಧ್ಯಕ್ಷರಾಗಿ ಡಾಕ್ಟರ್ ಪ್ರದೀಪ್ ನಾವೂರು, ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಮೋರ್ತಾಜೆ, ಸತೀಶ್ ಗೌಡ ಬೆದ್ರಬೆಟ್ಟು, ಕೆ.ಮೋಹನ್ ಬಂಗೇರ ಕಾರಿಂಜ, ರಮೇಶ್ ಕೆಂಗಾಜೆ, ಕೆ.ಧರ್ಣಪ್ಪ ಮೂಲ್ಯ ನಾವೂರು, ಮಂಜುನಾಥ ಗೌಡ ಹೆಬ್ಬಾರಪಲ್ಕೆ, ಪಳನಿ ಸ್ವಾಮಿ ಪಿ.ಆರ್. ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಗೌಡ ನಾವೂರು, ಕಾರ್ಯದರ್ಶಿಗಳಾಗಿ ಪಿ.ವಿನೋದ್ ಪ್ರಸಾದ್ ಕಲ್ಲಾಜೆ, ಶ್ರೀಧರ ಮುಗೇರ ನೇತ್ರಾವತಿ ನಗರ, ಹರೀಶ್ ಬಂಗೇರ ನಾವೂರು, ಶಶಿಧರ ಗೌಡ ಪಡೆಂಕ್ಕಲ್, ಕೋಶಾಧಿಕಾರಿಯಾಗಿ ಸಂತೋಷ್ ಎಂ ಬೆದ್ರಬೆಟ್ಟು ಹಾಗೂ ವಿವಿಧ ಉಪ ಸಮಿತಿಗಳಿಗೆ ಸಂಚಾಲಕರು, ಸಹ ಸಂಚಾಲಕರು, ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ವಿಜ್ರಂಭಣೆಯ 25ನೇ ವರ್ಷದ ಗಣೇಶೋತ್ಸವ ಆಚರಣೆಗೆ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಿದರು. ಪ್ರದೀಪ್ ನಾಗಾಜೆ ಸ್ವಾಗತಿಸಿ, ಪಿ.ವಿನೋದ್ ಪ್ರಸಾದ್ ಕಲ್ಲಾಜೆ ಧನ್ಯವಾದವಿತ್ತರು.

Related posts

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ಶಿಶಿಲ: ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಮಹಿಳಾ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆಯಲ್ಲಿ ಡಾ. ಎಂ ಎಚ್ ಮರಿಗೌಡರ ಜನ್ಮ ದಿನಾಚರಣೆ

Suddi Udaya

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾಮ ಸಭೆ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರ ಚರ್ಚೆ

Suddi Udaya
error: Content is protected !!