25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya
error: Content is protected !!