July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ನವ ವರ್ಷ-ನವ ವಿಧ ಪರಿಕಲ್ಪನೆಯಡಿ ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ವಲಯ ಅರಣ್ಯ ಅಧಿಕಾರಿ ಬೆಳ್ತಂಗಡಿಯ ಸಂಧ್ಯಾ ಸಚಿನ್ ಸುಳ್ಯ ಪಂಜ ಪ್ರಾದೇಶಿಕ ಅರಣ್ಯ ವಲಯಕ್ಕೆ ವರ್ಗಾವಣೆ

Suddi Udaya
error: Content is protected !!