September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ನಡ : ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ ಆಯ್ಕೆ

Suddi Udaya

ಸುದ್ದಿ ಉದಯ ವಾರ ಪತ್ರಿಕೆ ದೀಪಾವಳಿ ವಿಶೇಷಾಂಕ ಹಾಗೂ ‘ಹೇ ಶಾರದೆ’ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಜು.28: ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!