September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ

Suddi Udaya

ರಾಜ್ಯ ಮಟ್ಟದ ಫಾಸ್ಟ್ ಫೈವ್ ಪುರುಷರ ಹಾಗೂ ಮಹಿಳೆಯರ ನೆಟ್‌ಬಾಲ್ ಚಾಂಪಿಯನ್‌ಶಿಪ್‌: ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿ

Suddi Udaya

ಮೂಡುಕೋಡಿ ಕಳಸೊಟ್ಟು ಮನೆಯ ಚೆಲುವಮ್ಮ ನಿಧನ

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ವತಿಯಿಂದ ರಾಶಿ ಪೂಜೆ

Suddi Udaya
error: Content is protected !!