25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆಗೊಂಡಿತು.

ಮಕ್ಕಳಿಗಾಗಿಯೇ 26 ಗೀತೆಗಳನ್ನು ಒಳಗೊಂಡ ಈ ಪುಸ್ತಕವನ್ನು ಕರ್ನಾಟಕದ ಮುದ್ದು ಮಕ್ಕಳಿಗೆ ಅರ್ಪಿಸಿದರು. ಮುನ್ನುಡಿಯನ್ನು ದಿನೇಶ್ ಹೊಳ್ಳ ರವರು ಬರೆದಿದ್ದು, ಮುಖಪುಟ ವಿನ್ಯಾಸವನ್ನು ಪ್ರಾಂಜಲಿ ನಾವಡ ರಚಿಸಿದ್ದಾರೆ.

ಉಜಿರೆಯ ಉದ್ಯಮಿ ಲ|ನಿತ್ಯಾನಂದ ನಾವರ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಜೈನ್ ಆಮಂತ್ರಣ, ಕಲಾಪೋಷಕ ಭುಜಬಲಿ ಧರ್ಮಸ್ಥಳ , ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್. ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ, ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ ಹೆಚ್.ಪ್ರಕಾಶ್ ಶೆಟ್ಟಿ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ ರಂಜಿತ್ ಎಚ್ ಡಿ, ಉಜಿರೆ ಡೆಂಟಲ್ ಕ್ಲಿನಿಕ್ ನ ದೀಪಾಲಿ ಡೋಂಗ್ರೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿಯ ಹಿರಿಯ ಕಾರ್ಯಕರ್ತ ಪೂವಪ್ಪ ಮಡಿವಾಳ ಸನ್ಮಾನ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya
error: Content is protected !!