July 23, 2026
Uncategorized

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

ಉಜಿರೆ: ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು. ಪ್ರತೀಕ್ಷಾ ರವರು 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ. ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ಉಜಿರೆಯ ಕೃಷ್ಣ ಪ್ರಸಾದ್ ಮತ್ತು ಶ್ರೀಮತಿ ಹೇಮಾ ಆನಂದ್ ಅವರ ಸುಪುತ್ರಿ.
ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜು 2023-24 ಸಾಲಿನ ಅಂತಿಮ ವರ್ಷದ ಪರೀಕ್ಷೆಗಳಲ್ಲಿ ಎಲ್ಲಾ ಆರು ಇಂಜಿನಿಯರಿಂಗ್ ವಿಭಾಗಗಳಲ್ಲಿ ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ರವರು ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿರುವರೆಂದು ಪ್ರಾಂಶುಪಾಲರಾದ ಡಾ. ಅಶೋಕ್‌ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ರಾಷ್ಟ್ರ ನಿರ್ಮಾಣದ ಜವಾಬ್ದಾರಿ ಯುವಕರ ಮೇಲಿದೆ: ಬಿ.ಕೆ ಧನಂಜಯ್ ರಾವ್

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಚರ್ಚ್‌ರೋಡ್ ಬಾಡಿಗೆ ಮನೆಯಲ್ಲಿದ್ದ ರೋಷನ್ ನಾಪತ್ತೆ: ಪತ್ನಿ ಠಾಣೆಗೆ ದೂರು

Suddi Udaya
error: Content is protected !!