July 23, 2026
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

Related posts

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡೂರು ದುರ್ಗಾನಗರ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಯಾದವ ಕುಲಾಲ್, ಉಪಾಧ್ಯಕ್ಷರಾಗಿ ಸಂತೋಷ್ ಕುಮಾರ್ ಆಯ್ಕೆ

Suddi Udaya

ಉಜಿರೆ ಮಹಾ ಶಕ್ತಿ ಕೇಂದ್ರದ ಯುವಮೋರ್ಚಾ ಸಂಚಾಲಕರಾಗಿ ಕಿರಣ್

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಆಮಂತ್ರಣ ರಾಜ್ಯ ಸಮಿತಿಗೆ ಸದಸ್ಯರಾಗಿ ಹೆಚ್.ಕೆ ನಯನಾಡು ಆಯ್ಕೆ

Suddi Udaya
error: Content is protected !!