ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ.ವಿ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಸದಸ್ಯರಿಗೆ ಎಲ್.ಎ ವಿ ( LO ASSISTANCE VISIT ) ತರಬೇತಿ ಕಾರ್ಯಕ್ರಮ ವನ್ನು ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯ ವಠಾರದಲ್ಲಿ ವಲಯ ಉಪಾಧ್ಯಕ್ಷರಾದ ಜೆ ಸಿ ಜೆ ಎಫ್ ಡಿ ಶಂಕರ್ ರಾವ್ ಜು.20 ರಂದು ನಡೆಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅತಿಥಿಗಳನ್ನು ವೇದಿಕೆಗೆ ಕೆ ಶ್ರೀಧರ್ ರಾವ್ ಆಹ್ವಾನಿಸಿದರು. ಜೆ ಸಿ ವಿಕ್ಟರ್ ಜೆಸಿ ವಾಣಿ ವಾಚಿಸಿದರು. ರಾಜರಾಮ ಟಿ ಸಂಗಮ ನಗರ ಮತ್ತು ಬಾಲಕೃಷ್ಣ ದೇವಾಡಿಗ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ನಿಕಟಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ, ಮಹಿಳಾ ಅಧ್ಯಕ್ಷೆ ಶೋಭಾ ಪಿ, ಜೂನಿಯರ್ ಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ಬೆಳ್ತಂಗಡಿ ಮಂಜುಶ್ರೀ ಘಟಕದ ಜೂನಿಯರ್ ಜೆಸಿ ಅಧ್ಯಕ್ಷ ಸಮನ್ವಿತ್, ಪೂರ್ವ ಅಧ್ಯಕ್ಷರು ಸದಸ್ಯರು ಊರಿನ ಸಂಘ-ಸಂಸ್ಥೆಗಳ ಅಧ್ಯಕ್ಷರು ಸದಸ್ಯರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Leave a Comment

error: Content is protected !!