24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

ಧರ್ಮಸ್ಥಳ: ಭಾರೀ ಗಾಳಿ ಮಳೆಗೆ ಜು.22 ರಂದು ರಾತ್ರಿ ನೇತ್ರಾವತಿ ಹೊಳೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರವನ್ನು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಯಿತು.

ಗಾಳಿ ಮಳೆಯ ರಭಸಕ್ಕೆ ರಸ್ತೆಗೆ ದೊಡ್ಡ ಮರವೊಂದು ಮುರಿದು ಬಿದ್ದು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ಕಛೇರಿ ಮ್ಯಾನೇಜರ್ ಯೋಗೀಶ್ ರವರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಶಾಂತ್ ರಿಗೆ ಕರೆ ಮೂಲಕ ತಿಳಿಸಿದರು. ಕೂಡಲೇ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕ ಸ್ಥಳಕ್ಕೆ ತೆರಳಿ ಬಿದ್ದ ಮರವನ್ನು ಮಿಷಿನಿಂದ ತುಂಡರಿಸಿ ಬದಿಗೆ ಹಾಕಿದರು. ಈ ವೇಳೆ ನೇತ್ರಾವತಿ ಮಾಹಿತಿ ಕಛೇರಿಯ ಮ್ಯಾನೇಜರ್ ಹಾಗೂ ಅಲ್ಲಿಯ ಸ್ವಯಂಸೇವಕರು ಭಾಗಿಯಾಗಿದ್ದರು,

Related posts

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಅಳಕ್ಕೆ ಬ್ರೈಟ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಶಾಲಾ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ ರಕ್ಷಿತ್ ಶಿವರಾಮ್

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ- ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!