27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

ಧರ್ಮಸ್ಥಳ: ಭಾರೀ ಗಾಳಿ ಮಳೆಗೆ ಜು.22 ರಂದು ರಾತ್ರಿ ನೇತ್ರಾವತಿ ಹೊಳೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರವನ್ನು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸುವ ಕಾರ್ಯ ನಡೆಯಿತು.

ಗಾಳಿ ಮಳೆಯ ರಭಸಕ್ಕೆ ರಸ್ತೆಗೆ ದೊಡ್ಡ ಮರವೊಂದು ಮುರಿದು ಬಿದ್ದು ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು. ತಕ್ಷಣವೇ ಶ್ರೀ ಕ್ಷೇತ್ರ ಧರ್ಮಸ್ಥಳ ಮಾಹಿತಿ ಕಛೇರಿ ಮ್ಯಾನೇಜರ್ ಯೋಗೀಶ್ ರವರು ಹಾಗೂ ಧರ್ಮಸ್ಥಳ ಪೊಲೀಸ್ ಠಾಣೆಯ ಪ್ರಶಾಂತ್ ರಿಗೆ ಕರೆ ಮೂಲಕ ತಿಳಿಸಿದರು. ಕೂಡಲೇ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕ ಸ್ಥಳಕ್ಕೆ ತೆರಳಿ ಬಿದ್ದ ಮರವನ್ನು ಮಿಷಿನಿಂದ ತುಂಡರಿಸಿ ಬದಿಗೆ ಹಾಕಿದರು. ಈ ವೇಳೆ ನೇತ್ರಾವತಿ ಮಾಹಿತಿ ಕಛೇರಿಯ ಮ್ಯಾನೇಜರ್ ಹಾಗೂ ಅಲ್ಲಿಯ ಸ್ವಯಂಸೇವಕರು ಭಾಗಿಯಾಗಿದ್ದರು,

Related posts

ಉಜಿರೆ: ಎಂಪೀರಿಯಾ ಕಾರ್ಪೋರೇಶನ್ ಸಂಸ್ಥೆಯ 2ನೇ ವರ್ಷದ ಸಂಭ್ರಮಾಚರಣೆ ಹಾಗೂ ಮಾಹಿತಿ ಕಾರ್ಯಾಗಾರ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಮಾದಕ ವ್ಯಸನದ ಬಗ್ಗೆ ಜನಜಾಗೃತಿ ಮೂಡಿಸುವ ಮಹತ್ವದ ಉದ್ದೇಶ- ಉಜಿರೆಯಲ್ಲಿ ಮೊದಲ ಬಾರಿಗೆಯಶಸ್ವಿಯಾಗಿ ನಡೆದ ರೈನಥಾನ್

Suddi Udaya
error: Content is protected !!