25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ ಬೆಳ್ತಂಗಡಿ ಸಮಿತಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಹಭಾಗಿತ್ವದಲ್ಲಿ ನೀರಿನ ಸದ್ಬಳಕೆ ವಿಷಯದಲ್ಲಿ ವಿದ್ಯಾರ್ಥಿಗಳ ಕವಿಗೋಷ್ಟಿಯು ಜು 20 ರಂದು ಜೆಸಿ ಭವನದಲ್ಲಿ ನಡೆಯಿತು.

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷರಾದ ಜೆಸಿ ಹೆಚ್‌ಡಿ‌ಎಫ್ ರಂಜಿತ್ ಹೆಚ್ ಡಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ರಾಮಕೃಷ್ಣ ಭಟ್ ಬದನಾಜೆಯವರು ಉಪಸ್ಥಿತರಿದ್ದು 42 ವಿದ್ಯಾರ್ಥಿಗಳು ವಾಚಿಸಿದ ಕವನಗಳನ್ನು ಅವಲೋಕನ ಮಾಡಿ, ಕವನ ರಚನೆಗೆ ಕೆಲವು ಸಲಹೆಗಳನ್ನು ಕೊಟ್ಟರು.

ಅಭಾಸಾಪ ಬೆಳ್ತಂಗಡಿ ಸಮಿತಿಯ ಅಧ್ಯಕ್ಷರಾದ ಪ್ರೊ.ಗಣಪತಿ ಭಟ್ ಕುಳಮರ್ವರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅತಿಥಿಗಳು ದೀಪ ಪ್ರಜ್ವಲಿಸಿ ಶಾರದಾ ಮಾತೆಗೆ ಪುಷ್ಪಾರ್ಚನೆಗೈದರು.

ಅಭಾಸಾಪ ವಿಭಾಗ ಸಂಯೋಜಕ ಸುಂದರ ಶೆಟ್ಟಿ ಇಳಂತಿಲರವರು ಉಪಸ್ಥಿತರಿದ್ದರು. ಅಭಾಸಾಪ ಸಾಹಿತ್ಯ ಕೂಟ ಪ್ರಮುಖರಾದ ರಾಮಕೃಷ್ಣ ಭಟ್ ಬೆಳಾಲು ಮತ್ತು ಜತೆ ಕಾರ್ಯದರ್ಶಿ ಶ್ರೀಮತಿ ವಿನುತಾ ರಜತ್ ಗೌಡರವರು ಕಾರ್ಯಕ್ರಮವನ್ನು ನಿರ್ವಹಿಸಿದರು.

ಅಭಾಸಾಪ ಬೆಳ್ತಂಗಡಿ ಸಮಿತಿಯ ಕೋಶಾಧಿಕಾರಿಗಳಾದ ಕೇಶವ ಭಟ್ ಅತ್ತಾಜೆಯವರು, ಉಪಾಧ್ಯಕ್ಷ ವಿಶ್ವೇಶ್ವರ ಭಟ್ ಉಂಡೆಮನೆ, ವಿದ್ಯಾರ್ಥಿ ಪ್ರಕಾರದ ಪ್ರಮುಖ ಮಹಾಬಲ ಗೌಡ, ಸಾಹಿತ್ಯ ಕೂಟ ಸಹ ಸಂಚಾಲಕಿ ಶ್ರೀಮತಿ ನಯನಾ ಟಿ.ರವರು, ಸದಸ್ಯರಾದ ಶ್ರೀಮತಿ ಆಶಾ ಅಡೂರ್, ಶ್ರೀಮತಿ ವಸಂತಿ ಕುಳಮರ್ವ, ಶ್ರೀಮತಿ ಮೀನಾಕ್ಷಿ, ಜೆಸಿಐ ಪೂರ್ವಾಧ್ಯಕ್ಷರಾದ ಜೆಸಿ ನಾರಾಯಣ ಶೆಟ್ಟಿ, ಶ್ರೀಮತಿ ಹೇಮಾವತಿ ಕೆ. ಜೂನಿಯರ್ ಜೆಸಿ ಅಧ್ಯಕ್ಷರಾದ ಜೆಜೆಸಿ ಸಮನ್ವಿತ್ ಮತ್ತು ಸದಸ್ಯರು , ಶಿಕ್ಷಕರಾದ ಸುಮನ್, ವಿದ್ಯಾರ್ಥಿಗಳು ಮತ್ತು ಹೆತ್ತವರು ಭಾಗವಹಿಸಿದ್ದರು.

ಕವನ ವಾಚಿಸಿದ ವಿದ್ಯಾರ್ಥಿಗಳಿಗೆ ಪುಸ್ತಕದೊಂದಿಗೆ ಅಭಿನಂದನಾ ಪತ್ರವನ್ನು ನೀಡಲಾಯಿತು.

ಕಾರ್ಯಕ್ರಮವು ಶ್ರೀಮತಿ ನಯನಾ ಟಿ.ರವರ ಶಾರದಾ ಸ್ತುತಿಯೊಂದಿಗೆ ಆರಂಭಗೊಂಡು, ಅಭಾಸಾಪ ಬೆಳ್ತಂಗಡಿ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಸುಭಾಷಿಣಿಯವರ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಶಾಂತಿವನದಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ: ಕರ್ತವ್ಯ ನಿಷ್ಠೆಯೇ ದೇಶ ಸೇವೆ: ಕರ್ನಲ್ ಎಂ.ಜಿ ಜಯರಾಮ್

Suddi Udaya

ಅರಸಿನಮಕ್ಕಿ: ಕುಲಾಲರ ಸಂಘದ ವಿಶೇಷ ಮಾಸಿಕ ಸಭೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರದಲ್ಲಿ ಬೆಳ್ಳಿ ರಥೋತ್ಸವ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya
error: Content is protected !!