24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜು.22 ಮತ್ತು 23ರಂದು ನಡೆದ 25 ಗಂಟೆಗಳ 1ನಿಮಿಷ 38 ಸೆಕೆಂಡ್ ಗಳ ನಿರಂತರ ಯೋಗ ಕಾರ್ಯಕ್ರಮ ನಡೆದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಗೊಂಡಿದೆ.


ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಿದ್ದು , ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಭಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಯಿತು .


ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100, ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಯಿತು.

ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಗೊಂಡಿದೆ.


ಮುಗೇರಡ್ಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾಭಿಮಾನಿಗಳು, ಶಾಲಾ ಟ್ರಸ್ಟಿಗಳು ಮತ್ತು ಬಂದಾರು ಗ್ರಾ.ಪಂ, ಸದಸ್ಯ ಬಾಲಕೃಷ್ಣ ಮುಗೇರಡ್ಕ, ಮುಖ್ಯೋಪಾಧ್ಯಾಯರು ಮಾಧವ ಮುಗೇರಡ್ಕ, ಹಳೇವಿದ್ಯಾರ್ಥಿಗಳು ಯೋಗಾಸನ ಶಿಬಿರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡರು.

Related posts

ಎಸ್.ಡಿ.ಎಂ. ವಸತಿ ಪ.ಪೂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಕವಿತಾ ಉಮೇಶ್ ರವರಿಗೆ ‘ಕನ್ನಡ ಸ್ವಾಭಿಮಾನ ಸ್ಮರಣಿಕೆಯ ಗೌರವ ಪ್ರಶಸ್ತಿ’

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya
error: Content is protected !!