32.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿವರದಿ

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜು.22 ಮತ್ತು 23ರಂದು 25 ಗಂಟೆಗಳ ನಿರಂತರ ಯೋಗ ಕಾರ್ಯಕ್ರಮವು ನಡೆಯಲಿದ್ದು. ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಿದರು.

ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಬಟ್ಟೆ, ಯೋಗ ಕ್ಯಾಲೆಂಡರ್, ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಯಿತು.


ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂ.100, ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಯಿತು.

ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಮೂರು ವಿಶ್ವ ದಾಖಲೆಯನ್ನು ಸಾರಿಸಲು ಪ್ರಯತ್ನಿಸಲಾಗುತ್ತದೆ.
ಮುಗೇರಡ್ಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾಭಿಮಾನಿಗಳು, ಟ್ರಸ್ಟಿಗಳು, ಮುಖ್ಯೋಪಾಧ್ಯಾಯರು, ಹಳೇವಿದ್ಯಾರ್ಥಿಗಳು ಯೋಗಾಸನ ಶಿಬಿರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡರು.

Related posts

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ಗೌರವ ನಮನ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಕೊಕ್ಕಡ: ಹೊಲಿಗೆ ತರಬೇತಿ ಕೇಂದ್ರದ ಸಮಾರೋಪ ಸಮಾರಂಭ

Suddi Udaya

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

Suddi Udaya
error: Content is protected !!