27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಮಿತ್ತಬಾಗಿಲು: ಕೊಳಂಬೆ ನಿವಾಸಿ ವಿದ್ಯಾ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಗ್ರಾ.ಪಂ. ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ನೇತೃತ್ವದಲ್ಲಿ “ಅಕ್ಕ ಕೆಫೆ ” ಶುಭಾರಂಭ

Suddi Udaya
error: Content is protected !!