25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya

ಕಾಶಿಪಟ್ಣ: ಗೊಲ್ಲ(ಯಾದವ) ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ : ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಬರೆಂಗಾಯದಲ್ಲಿ ಅಡಿಕೆ ಮತ್ತು ಕಾಳುಮೆಣಸು ಖರೀದಿ ಉಪಕೇಂದ್ರ ಆರಂಭ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ತಾಂತ್ರಿಕ ಸಂವಾದ

Suddi Udaya

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya
error: Content is protected !!