September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜಾ ರವರ ಇಂದಬೆಟ್ಟು ಜನಸ್ಪಂದನ ಕಾರ್ಯಕ್ರಮದ ಫಲಶೃತಿ: ಇಂದಬೆಟ್ಟು-ಗುರಿಪಳ್ಳ ರಸ್ತೆಯ ಬದಿಯ ಗಿಡಗಂಟಿಗಳ ತೆರವು ಕಾರ್ಯ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿಗೆ ತಾ.ಪಂ ಇಓ ಭೇಟಿ, ಸ್ಥಳ ಪರಿಶೀಲನೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya
error: Content is protected !!