July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆಗೊಂಡಿತು.

ಮಕ್ಕಳಿಗಾಗಿಯೇ 26 ಗೀತೆಗಳನ್ನು ಒಳಗೊಂಡ ಈ ಪುಸ್ತಕವನ್ನು ಕರ್ನಾಟಕದ ಮುದ್ದು ಮಕ್ಕಳಿಗೆ ಅರ್ಪಿಸಿದರು. ಮುನ್ನುಡಿಯನ್ನು ದಿನೇಶ್ ಹೊಳ್ಳ ರವರು ಬರೆದಿದ್ದು, ಮುಖಪುಟ ವಿನ್ಯಾಸವನ್ನು ಪ್ರಾಂಜಲಿ ನಾವಡ ರಚಿಸಿದ್ದಾರೆ.

ಉಜಿರೆಯ ಉದ್ಯಮಿ ಲ|ನಿತ್ಯಾನಂದ ನಾವರ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಜೈನ್ ಆಮಂತ್ರಣ, ಕಲಾಪೋಷಕ ಭುಜಬಲಿ ಧರ್ಮಸ್ಥಳ , ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್. ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ, ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ ಹೆಚ್.ಪ್ರಕಾಶ್ ಶೆಟ್ಟಿ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ ರಂಜಿತ್ ಎಚ್ ಡಿ, ಉಜಿರೆ ಡೆಂಟಲ್ ಕ್ಲಿನಿಕ್ ನ ದೀಪಾಲಿ ಡೋಂಗ್ರೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya

ಉಜಿರೆ ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ವತಿಯಿಂದ ಸಾಧಕರಿಗೆ ಸನ್ಮಾನ

Suddi Udaya

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

Suddi Udaya

ಬೆಳ್ತಂಗಡಿ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!