38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

ಉಜಿರೆ: ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕು. ಪ್ರತೀಕ್ಷಾ ರವರು 2024 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (VTU) ಬಿ. ಇ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಒಂಬತ್ತನೇ ರ್‍ಯಾಂಕ್ ಪಡೆದಿರುತ್ತಾರೆ.

ಇವರು ಉಜಿರೆಯ ಕೃಷ್ಣ ಪ್ರಸಾದ್ ಮತ್ತು ಶ್ರೀಮತಿ ಹೇಮಾ ಆನಂದ್ ಅವರ ಸುಪುತ್ರಿ.
ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜು 2023-24 ಸಾಲಿನ ಅಂತಿಮ ವರ್ಷದ ಪರೀಕ್ಷೆಗಳಲ್ಲಿ ಎಲ್ಲಾ ಆರು ಇಂಜಿನಿಯರಿಂಗ್ ವಿಭಾಗಗಳಲ್ಲಿ ಶೇಕಡಾ 100 ಫಲಿತಾಂಶ ಪಡೆದಿರುತ್ತದೆ. ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ವೀರೇಂದ್ರ ಹೆಗ್ಗಡೆಯವರು, ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ ರವರು ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಯನ್ನು ಅಭಿನಂದಿಸಿರುವರೆಂದು ಪ್ರಾಂಶುಪಾಲರಾದ ಡಾ. ಅಶೋಕ್‌ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಪಿ.ಎಂ ಕಿಸಾನ್ ಇಕೆ ವೈ ಸಿ ಬಾಕಿ ಇರುವ ರೈತರಿಗೆ ಸೂಚನೆ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನವೀಕೃತ ಉಜಿರೆ ಸಂತ ಅಂತೋನಿ ಚರ್ಚ್ ಉದ್ಘಾಟನೆ; ಆಶೀರ್ವಾಚನ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವಸಾಯಿ ಡಿ ಜೆ ಸೌಂಡ್ಸ್ ಇವೆಂಟ್ಸ್ & ಎಲೆಕ್ಟ್ರಿಕಲ್, ಪ್ಲಮ್ಮಿoಗ್ ಹಾಗೂ ಸದಾಶಿವ ಶಾಮಿಯಾನ ಸರ್ವಿಸಸ್ ಅಂಗಡಿ ಹಾಗೂ ವಾಹನ ಪೂಜೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಅವರಿಗೆ ಮುಖ್ಯಮಂತ್ರಿ ಪದಕ ಪ್ರದಾನ:

Suddi Udaya
error: Content is protected !!