23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

ಬೆಳ್ತಂಗಡಿ :ಪರಿಶಿಷ್ಟ ಸಮುದಾಯಗಳ ಹಾಗೂ ಸಾಂವಿಧಾನಿಕ ಹಕ್ಕುಗಳ ಪರ ನಿರಂತರ ದನಿಯಾಗಿ ನಿಂತು ಹೋರಾಟ ನಡೆಸಿಕೊಂಡು ಬಂದ ಹಿನ್ನಲೆಯ ಛಲವಾದಿ ನಾರಾಯಣ ಸ್ವಾಮಿಯವರ ನಾಯಕತ್ವ ಹಾಗೂ ಪಕ್ಷ ಬದ್ಧತೆಯನ್ನು ಗುರುತಿಸಿ ವಿಧಾನ ಪರಿಷತ್ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದ ಬಿಜೆಪಿ ವರಿಷ್ಟರು ಇದೀಗ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡುವ ಮೂಲಕ ‘ಸಾಮಾಜಿಕ ನ್ಯಾಯ’ ನಮ್ಮ ಪಕ್ಷದ ಆದ್ಯತೆ ಎಂಬ ಸಂದೇಶ ರವಾನಿಸಿದ್ದಾರೆ.

ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಮಹರ್ಷಿ ವಾಲ್ಮೀಕಿ ನಿಗಮದ ₹ 187 ಕೋಟಿ ಗುಳುಂ, ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ಮೀಸಲಾಗಿದ್ದ ಸಾವಿರಾರು ಕೋಟಿ ರೂಪಾಯಿಗಳು ಇತರ ಯೋಜನೆಗಳಿಗಾಗಿ ನಿಯಮ ಉಲ್ಲಂಘಿಸಿ ಬಳಕೆ, ಭ್ರಷ್ಟಾಚಾರಗಳ ಸರಣೀ ಸರಮಾಲೆ, ಸ್ವಜನ ಪಕ್ಷಪಾತ ಹಾಗೂ ಮುಡಾ ಹಗರಣಗಳ ವ್ಯೂಹದಲ್ಲಿ ಸಿಲುಕಿ ಅಭಿವೃದ್ಧಿ ಶೂನ್ಯ ಆಡಳಿತದಿಂದ ಜನಾಕ್ರೋಶ ಎದುರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಸಮರ್ಥವಾಗಿ ಧ್ವನಿ ಎತ್ತಲು ನಾರಾಯಣ ಸ್ವಾಮಿಯವರನ್ನು ಆಯ್ಕೆ ಮಾಡಿರುವುದು ಸಮಯೋಚಿತ ನಿರ್ಧಾರವಾಗಿದೆ.

Related posts

ಬೆಳ್ತಂಗಡಿ ಮಹಿಳಾ ವೃಂದದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
error: Content is protected !!