July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು ಪ್ರಾರಂಭಗೊಂಡು ಸೆಪ್ಟೆಂಬರ್ 29 ರಂದು ಭಜನೋತ್ಸವದೊಂದಿಗೆ ಸಮಾಪನಗೊಳ್ಳಲಿದೆ.

ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು : 18 ವರ್ಷದಿಂದ 45 ವರ್ಷದ ಒಳಗಿನವರಾಗಿರಬೇಕು., ಭಜನೆಯಲ್ಲಿ ರಾಗ, ತಾಳ, ಲಯದ ಜ್ಞಾನವುಳ್ಳವರಾಗಿರಬೇಕು, ಇದುವರೆಗಿನ ಯಾವುದೇ ಭಜನಾ ಕಮ್ಮಟದಲ್ಲಿ ಭಾಗವಹಿಸದೇ ಇರುವವರಾಗಿರಬೇಕು, ಒಂದು ಭಜನಾ ಮಂಡಳಿಯಿಂದ 2 ಜನ ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶ, ತಾವು ಕಲಿತು, ಇನ್ನೊಬ್ಬರಿಗೆ ಕಲಿಸಿಕೊಡುವವರಾಗಿರಬೇಕು.
 

ಆಸಕ್ತರು ಸೆಪ್ಟೆಂಬರ್ 10ರ ಮೊದಲು ಸಂಬಂಧಪಟ್ಟ ಪದಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಭಜನಾ ಕಮ್ಮಟದ ಸಂಚಾಲಕರಾದ ಟಿ. ಸುಬ್ರಹ್ಮಣ್ಯ ಪ್ರಸಾದ್ ಹಾಗೂ ಭಜನಾ ಕಮ್ಮಟದ ಕಾರ್ಯದರ್ಶಿಗಳಾದ ವೀರು ಶೆಟ್ಟಿಯವರು ತಿಳಿಸಿದ್ದಾರೆ.
 ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9632064164, 8130132835, 9663464648

Related posts

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya
error: Content is protected !!