23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯು ಜು.22 ಮತ್ತು 23ರಂದು ನಡೆದ 25 ಗಂಟೆಗಳ 1ನಿಮಿಷ 38 ಸೆಕೆಂಡ್ ಗಳ ನಿರಂತರ ಯೋಗ ಕಾರ್ಯಕ್ರಮ ನಡೆದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಗೊಂಡಿದೆ.


ಯೋಗ ಗುರು ಕುಶಾಲಪ್ಪ ಗೌಡ ರವರು ತಲಾ ಒಂದೂವರೆ ಗಂಟೆಯ 17 ಬ್ಯಾಚ್ ಗಳಲ್ಲಿ ತರಬೇತಿ ನೀಡಿದ್ದು , ಭಾಗವಹಿಸುವ ಶಿಬಿರಾರ್ಥಿಗಳಿಗೆ ರೂಪಾಯಿ 500 ಮೌಲ್ಯದ ಯೋಗ ಪುಸ್ತಕ, ಯೋಗ ಭಟ್ಟೆ, ಯೋಗ ಕ್ಯಾಲೆಂಡರ್,ಯೋಗ ಪ್ರಮಾಣ ಪತ್ರ ಮತ್ತು ಉಪಹಾರ ನೀಡಲಾಯಿತು .


ಮುಗೇರಡ್ಕ ಸರ್ಕಾರಿ ಶಾಲಾ ಸೇವಾ ಟ್ರಸ್ಟ್ ನಾ ವಿದ್ಯಾನಿಧಿಗಾಗಿ ಆಯೋಜಿಸಿರುವ ಈ ಶಿಬಿರಕ್ಕೆ ವಿದ್ಯಾರ್ಥಿಗಳಿಂದ ರೂಪಾಯಿ 100, ಸಾರ್ವಜನಿಕರಿಂದ ರೂಪಾಯಿ 200 ನ್ನು ದೇಣಿಗೆ ರೂಪದಲ್ಲಿ ಪಡೆಯಲಾಯಿತು.

ಮ್ಯಾರಥಾನ್ ಯೋಗ ಶಿಬಿರ ತರಬೇತಿಯ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರ್ಪಡೆಗೊಂಡಿದೆ.


ಮುಗೇರಡ್ಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾಭಿಮಾನಿಗಳು, ಶಾಲಾ ಟ್ರಸ್ಟಿಗಳು ಮತ್ತು ಬಂದಾರು ಗ್ರಾ.ಪಂ, ಸದಸ್ಯ ಬಾಲಕೃಷ್ಣ ಮುಗೇರಡ್ಕ, ಮುಖ್ಯೋಪಾಧ್ಯಾಯರು ಮಾಧವ ಮುಗೇರಡ್ಕ, ಹಳೇವಿದ್ಯಾರ್ಥಿಗಳು ಯೋಗಾಸನ ಶಿಬಿರದಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಪಡೆದುಕೊಂಡರು.

Related posts

ಉಜಿರೆ: 35 ಮಂದಿ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ತೆಂಕಕಾರಂದೂರು ವಿಷ್ಣು ಮೂರ್ತಿ ಮಕ್ಕಳ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಧರ್ಮಸ್ಥಳ; ಹದಗೆಟ್ಟ ‌ನೇರ್ತನೆ ರಸ್ತೆ; ಗ್ರಾಮಸ್ಥರಿಂದ ಶ್ರಮದಾನದ ಮೂಲಕ ದುರಸ್ತಿ

Suddi Udaya
error: Content is protected !!