July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಬೆಳ್ತಂಗಡಿಯ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya
error: Content is protected !!