23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

ಬೆಳ್ತಂಗಡಿ: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಹೊರಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಲಾರಿಯೊಂದು ಟಯರ್ ಪಂಚರ್ ಆಗಿ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು. ಅದರ ಚಾಲಕ ಕರಾಯಕ್ಕೆ ಹೋಗಿ ಟಯರ್ ಪಂಚ‌ರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯ‌ರ್ ಜೋಡಣೆ ಮಾಡಲು ಕರಾಯದಿಂದಲೇ ಬಂದ ಟಯರ್ ಕಾರ್ಮಿಕ ಜೋಡಣೆ ವೇಳೆ ಟಯರ್‌ನ ರಿಂಗ್ ಹೊರಚಿಮ್ಮಿದ ರಭಸಕ್ಕೆ ಟಯರ್ ಸಮೇತ ಕರಾಯ ಜನತಾ ಕಾಲೋನಿ ಕರೀಂ ರವರ ಮಗ ರಶೀದ್ ತುಸು ದೂರ ಎಸೆಯಲ್ಪಟ್ಟಿದ್ದಾರೆ. ತಕ್ಷಣ ತೀವ್ರ ಗಾಯಗೊಂಡ ಕಾರ್ಮಿಕನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸ್ತುತಿರವರ ಹುಟ್ಟುಹಬ್ಬದ ಪ್ರಯುಕ್ತ ಉರುಂಬಿದೊಟ್ಟು ಅಂಗನವಾಡಿಯ ಸುತ್ತ ಗಿಡಗಂಟಿಗಳ ಸ್ವಚ್ಛತೆ ಹಾಗೂ ತೆಂಗಿನ ಗಿಡ ನೆಡುವ ಮೂಲಕ ಆಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya
error: Content is protected !!