April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆಗೊಂಡಿತು.

ಮಕ್ಕಳಿಗಾಗಿಯೇ 26 ಗೀತೆಗಳನ್ನು ಒಳಗೊಂಡ ಈ ಪುಸ್ತಕವನ್ನು ಕರ್ನಾಟಕದ ಮುದ್ದು ಮಕ್ಕಳಿಗೆ ಅರ್ಪಿಸಿದರು. ಮುನ್ನುಡಿಯನ್ನು ದಿನೇಶ್ ಹೊಳ್ಳ ರವರು ಬರೆದಿದ್ದು, ಮುಖಪುಟ ವಿನ್ಯಾಸವನ್ನು ಪ್ರಾಂಜಲಿ ನಾವಡ ರಚಿಸಿದ್ದಾರೆ.

ಉಜಿರೆಯ ಉದ್ಯಮಿ ಲ|ನಿತ್ಯಾನಂದ ನಾವರ ಈ ಪುಸ್ತಕವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವಿಜಯ್ ಕುಮಾರ್ ಜೈನ್ ಆಮಂತ್ರಣ, ಕಲಾಪೋಷಕ ಭುಜಬಲಿ ಧರ್ಮಸ್ಥಳ , ಧರ್ಮಸ್ಥಳ ಸಹಕಾರಿ ಸಂಘದ ಅಧ್ಯಕ್ಷ ಪ್ರೀತಮ್. ಡಿ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ ಸುವರ್ಣ, ಉಜಿರೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ ಹೆಚ್.ಪ್ರಕಾಶ್ ಶೆಟ್ಟಿ, ಬೆಳ್ತಂಗಡಿ ಜೆಸಿಐ ಅಧ್ಯಕ್ಷ ರಂಜಿತ್ ಎಚ್ ಡಿ, ಉಜಿರೆ ಡೆಂಟಲ್ ಕ್ಲಿನಿಕ್ ನ ದೀಪಾಲಿ ಡೋಂಗ್ರೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಸುದ್ದಿ ಉದಯ ವಾರಪತ್ರಿಕೆ ವರದಿಗೆ ಅಳದಂಗಡಿ ಗ್ರಾ.ಪಂನಿಂದ ಸ್ಪಂದನೆ: ಶೋಚನೀಯ ಸ್ಥಿಯಲ್ಲಿದ್ದ ಸೋರುತ್ತಿದ್ದ ಮನೆಯ ಮೇಲ್ಚಾವಣಿ ತೆರವು: ಮೇಲ್ಛಾವಣಿಗೆ ಶೀಟ್ ಅಳವಡಿಕೆಯ ಕೆಲಸ ಪ್ರಾರಂಭ,ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗ ವತಿಯಿಂದ ಪ್ರಥಮ ದ್ವಿತೀಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಓರಿಯೆಂಟಷನ್  ಕಾರ್ಯಕ್ರಮ

Suddi Udaya

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ