23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ ಬಿದ್ದಿದ್ದು. ಘಟನೆ ವೇಳೆ ಬೈಕ್ ಸವಾರರಿಬ್ಬರು ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕಿಳಿದಿರುವ ಘಟನೆ ಗುರುವಾಯನಕೆರೆ ವರಕಬೆಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಕಂಬ ಲಾರಿ ಮೇಲೆ ಬೀಳುವ ವೇಳೆ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದರಿಂದ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದು. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಆಫ್ ಅಗಿದ್ದರಿಂದ ಲಾರಿ ಚಾಲಕ ಹಾಗೂ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪಾರಾಗಿದ್ದಾರೆ.

Related posts

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ಗುಂಡೂರಿ: ಮುದ್ದಾಡಿ ನಿವಾಸಿ ಪುರಲ್ಲ ನಿಧನ

Suddi Udaya

ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ‌.ವಸಂತ ಸಾಲಿಯಾನ್ ನಿವಾಸಕ್ಕೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ವೇಣೂರು: ಪೆರಿಂಜೆ ನಿವಾಸಿ ಪಿ.ಉಸ್ಮಾನ್ ನಿಧನ

Suddi Udaya
error: Content is protected !!