23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ ಬಿದ್ದಿದ್ದು. ಘಟನೆ ವೇಳೆ ಬೈಕ್ ಸವಾರರಿಬ್ಬರು ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕಿಳಿದಿರುವ ಘಟನೆ ಗುರುವಾಯನಕೆರೆ ವರಕಬೆಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಕಂಬ ಲಾರಿ ಮೇಲೆ ಬೀಳುವ ವೇಳೆ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದರಿಂದ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದು. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಆಫ್ ಅಗಿದ್ದರಿಂದ ಲಾರಿ ಚಾಲಕ ಹಾಗೂ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪಾರಾಗಿದ್ದಾರೆ.

Related posts

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಬೆಳ್ತಂಗಡಿ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಬಿವೋಕ್‌ ವಿದ್ಯಾರ್ಥಿಗಳಿಗೆ ವರ್ಡ್‌ಪ್ರೆಸ್‌ ಕಾರ್ಯಾಗಾರ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya
error: Content is protected !!