July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ ಬಿದ್ದಿದ್ದು. ಘಟನೆ ವೇಳೆ ಬೈಕ್ ಸವಾರರಿಬ್ಬರು ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕಿಳಿದಿರುವ ಘಟನೆ ಗುರುವಾಯನಕೆರೆ ವರಕಬೆಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಕಂಬ ಲಾರಿ ಮೇಲೆ ಬೀಳುವ ವೇಳೆ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದರಿಂದ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದು. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಆಫ್ ಅಗಿದ್ದರಿಂದ ಲಾರಿ ಚಾಲಕ ಹಾಗೂ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪಾರಾಗಿದ್ದಾರೆ.

Related posts

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಬೆಳ್ತಂಗಡಿ ಪ.ಪಂ. ಮುಖ್ಯಾಧಿಕಾರಿಯಾಗಿ ರಾಜೇಶ್ ಮರು ನೇಮಕ

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಉಜಿರೆ ವಿದ್ಯುತ್ ಉಪಕೇಂದ್ರ ಕಾಮಗಾರಿ ವಿಳಂಬ: ಅರಣ್ಯ ಇಲಾಖೆ ಅನುಮತಿ ದೊರೆತ ಕೂಡಲೇ ಕಾಮಗಾರಿ ಮುಂದುವರಿಯುವುದು-ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya
error: Content is protected !!