30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು ಇವರಿಗೆ ವಾಸ್ತವ್ಯಕ್ಕೆ ಬಹಳ ಕಷ್ಟಕರವಾಗಿತ್ತು.
ಇದನ್ನು ಗಮನಿಸಿದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹರಿಕೃಷ್ಣ ರವರು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು ಪಂಚಾಯತ್ ವತಿಯಿಂದ ಟಾರ್ಪಲ್ ನ್ನು ಒದಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್ ರವರಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಟಾರ್ಪಲ್ ನ್ನು ಹಾಕಿ ದುರಸ್ಥಿ ಮಾಡಿಕೊಡುವ ಸಹಕಾರವನ್ನು ಮನವಿ ಮಾಡಿಕೊಂಡರು.

ಈ ಬಗ್ಗೆ ಮೇಲ್ವಿಚಾರಕರು ಶೌರ್ಯ ಘಟಕದ ಸಂಯೋಜಕರಾದ ವಸಂತಿ ರವರಿಗೆ ತಿಳಿಸಿದಾಗ ತಕ್ಷಣ ಸಂಯೋಜಕರು ಸ್ವಯಂ ಸೇವಕರನ್ನು ಈ ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು. ಕೂಡಲೇ ಘಟಕ ಪ್ರತಿನಿಧಿ ಮಂಜುನಾಥ್, ಒಲ್ವಿನ್ ಡಿಸೋಜ, ಅರ್ವಿನ್ ಮಿರಾಂದ, ವಸಂತ್ ರವರು ಸ್ಥಳಕ್ಕೆ ಧಾವಿಸಿ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಮನೆಯ ದುರಸ್ಥಿ ಕಾರ್ಯಾಚರಣೆ ನಡೆಸಿ ಬಡ ಮಹಿಳೆಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟರು.

Related posts

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ವಗ್ಗ: ಬೈಕ್ ಮತ್ತು ಸರ್ಕಾರಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಪೂರ್ವಧ್ಯಕ್ಷರಾದ ಪ್ರಥ್ವಿರಂಜನ್ ರಾವ್’ರವರ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ ಇನ್ನೂ ಕೇವಲ 8 ದಿನ ಮಾತ್ರ

Suddi Udaya
error: Content is protected !!