July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ , ಎನ್ ಎಸ್ ಎಸ್ ಘಟಕ ,ಗ್ರಾಮ ವಿಕಾಸ ಸಮಿತಿ ಮುಂಡಾಜೆ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ,ಮುಂಡಾಜೆ ಇವುಗಳ ಜಂಟಿ ಆಶ್ರಯದಲ್ಲಿ ಜು.23 ರಂದು ಕಾನೂನು ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಜನನ ಮರಣ ನೋಂದಣಿ ಇತ್ಯಾದಿ ವಿಷಯಗಳ ಕುರಿತು ಕುರಿತು ಬೆಳ್ತಂಗಡಿಯ ನ್ಯಾಯವಾದಿಗಳಾದ ಸುಭಾಷಿಣಿ ಆರ್ , ಅಸ್ಮ, ಹಾಗೂ ಮಮ್ತಾಜ್ ಅವರು ಮಾಹಿತಿ ನೀಡಿದರು.

ಮಾಹಿತಿ ಕಾರ್ಯಗಾರದ ಅಧ್ಯಕ್ಷತೆಯನ್ನು ಪ್ರಾಂಶುಪಾಲೆ ಜಾಲಿ ಓ ಎ ವಹಿಸಿದ್ದರು. ಕಾನೂನು ಸಾಕ್ಷರತಾ ಕ್ಲಬ್ ಸಂಯೋಜಕ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಕಾರ್ಯಕ್ರಮ ಸಂಯೋಜಿಸಿದ್ದರು. ವಿದ್ಯಾರ್ಥಿನಿ ಧನ್ಯ ವಂದಿಸಿದರು. ವಿದ್ಯಾರ್ಥಿ ಕೆ ಎನ್ ಧನುಷ್ ಕಾರ್ಯಕ್ರಮ ನಿರೂಪಿಸಿದರು.

Related posts

ಅಂಡಿಂಜೆ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ: ಸಿರಿ ಧಾನ್ಯಗಳ ಬಳಕೆ ಹಾಗೂ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ನಾರಾವಿ:”ಸನ್ನಿಧಿ” ಪ್ಯಾಲೇಸ್ ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯನ್ ಮತ್ತು ಮಕ್ಕಳಿಂದ ದೈಪಾಲಬೆಟ್ಟು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಮುಖಾಯಾಮ ಮಂಟಪ ದುರಸ್ತಿಗೆ ಮರಮಟ್ಟು ಹಾಗೂ ಭಂಡಾರಕ್ಕೆ ಪಲ್ಲಕ್ಕಿ ಸಮರ್ಪಣೆ

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!