ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ.

ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ ಚಾಣಾಕ್ಷತೆ ಮೆರೆದಿದ್ದರು. ಆದರೆ ಬಹಳಷ್ಟು ಘಟಾನುಘಟಿ ಆಟಗಾರರ ಲೆಕ್ಕಾಚಾರಗಳನ್ನು ತಲೆಕೆಳಗೆ ಮಾಡಿ ಮಿಂಚಿದ ಪ್ರತಾಪ ಸಿಂಹ ನಾಯಕ್ ಮೂರನೇ ಸ್ಥಾನ ಪಡೆದಿದ್ದಾರೆ. ಇವರಿಗೆ, ಸಿಎಂ ಸಿದ್ಧರಾಮಯ್ಯರವರು ಪ್ರಶಸ್ತಿ ಫಲಕ ನೀಡಿ ಅಭಿನಂದಿಸಿದರು.

ಈವೇಳೆ ಡಿಸಿಎಂ ಡಿ.ಕೆ ಶಿವಕುಮಾ‌ರ್, ಸ್ಪೀಕ‌ರ್ ಯು. ಟಿ ಖಾದರ್ ಉಪಸ್ಥಿತರಿದ್ದರು.

Leave a Comment

error: Content is protected !!