25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ


ಉಜಿರೆ : ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಸಮಾರಂಭವು ಜು.22 ರಂದು ಕಾಲೇಜಿನ ಸಭಾಂಗಣದಲ್ಲಿ ನೆರೆವೇರಿತು.

ಉದ್ಘಾಟನಾ ಕಾರ್ಯಕ್ರಮವನ್ನು ಕೆವಿಜಿ ಪಾಲಿಟೆಕ್ನಿಕ್, ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಚಂದ್ರಶೇಖರ ಬಿಳಿನೆಲೆ ಉದ್ಘಾಟಿಸಿ, ಯುವಕ ಯುವತಿಯರಿಗೆ ವ್ಯಕ್ತಿತ್ವ ವಿಕಸನ, ದೇಶಪ್ರೇಮ ಮತ್ತು ಸಹಾಯ ಮನೋಭಾವಕ್ಕೆ ಈ ರೀತಿಯ ಸ್ವಯಂ ಸೇವಾ ಸಂಘಟನೆಗಳು ಅವಶ್ಯಕವಾಗಿದೆ, ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಜೀವನಕ್ಕೆ ಪೂರಕ ಎಂದರು.

ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಗೌಡ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಸಭಾಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲ ಸಂತೋಷ್ ಶುಭಹಾರೈಸಿದರು.

ಸಭಾ ಕಾರ್ಯಕ್ರಮವನ್ನು ಸ್ವಯಂ ಸೇವಕಿ ಅಮಿತಾ ಸ್ವಾಗತಿಸಿ, ಮಿಲನ ವಂದಿಸಿದರು. ಸ್ವಯಂ ಸೇವಕಿ ಭವಿತಾ ನಿರೂಪಿಸಿದರು.

Related posts

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ:ಸಹಕಾರಿಗಳ ನಡಿಗೆ ಧರ್ಮಸ್ಥಳ ಕಡೆಗೆ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೈಕ್-ಪಿಕಪ್ ಡಿಕ್ಕಿ: ಗಂಭೀರ ಗಾಯಗೊಂಡ ಬೈಕ್‌ ಸವಾರ ನವೀನ್ ಪೂಜಾರಿ ಮೃತ್ಯು

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya
error: Content is protected !!