April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.24ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ರವರು ಮಾತನಾಡಿ ಸರಕಾರದ ಏನೇ ಅನುದಾನ ಇದ್ದಲ್ಲಿ ಪ್ರಾಮಾಣಿಕವಾಗಿ ಅದನ್ನು ದೊರಕಿಸುವಲ್ಲಿ ಕೆಲಸ ಮಾಡುತ್ತೇವೆ. ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಮುಂದಕ್ಕೂ ಬೇಕು ಎಂದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಸದಸ್ಯರಾದ ಜನಾರ್ಧನ ಪೂಜಾರಿ, ಗೋಪಾಲ ಶೆಟ್ಟಿ, ಧನಂಜಯ್, ಶ್ರೀಮತಿ ಗೀತಾ, ಶ್ರೀಮತಿ ತೇಜಾಕ್ಷಿ, ಶ್ರೀಮತಿ ಗುಣವತಿ, ಶ್ರೀಮತಿ ರಜನಿ, ದಿನೇಶ್ ಮೂಲ್ಯ, ಶ್ರೀಮತಿ ಪವಿತ್ರ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನವೀನ್ ಎ ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸಿಬ್ಬಂದಿ ಆನಂದ್ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಾಗಾರ: 40 ಮಂದಿ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಜಯವಿಕ್ರಮ್ ಕಲ್ಲಾಪು

Suddi Udaya
error: Content is protected !!