22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ ಬಿದ್ದಿದ್ದು. ಘಟನೆ ವೇಳೆ ಬೈಕ್ ಸವಾರರಿಬ್ಬರು ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕಿಳಿದಿರುವ ಘಟನೆ ಗುರುವಾಯನಕೆರೆ ವರಕಬೆಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಕಂಬ ಲಾರಿ ಮೇಲೆ ಬೀಳುವ ವೇಳೆ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದರಿಂದ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದು. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಆಫ್ ಅಗಿದ್ದರಿಂದ ಲಾರಿ ಚಾಲಕ ಹಾಗೂ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪಾರಾಗಿದ್ದಾರೆ.

Related posts

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

Suddi Udaya
error: Content is protected !!