September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

ಬೆಳ್ತಂಗಡಿ: ಅಹಿಂಸಾ ಪರಮೋ ಧರ್ಮ ಎನ್ನುವುದು ಜಗತ್ತಿಗೆ ಜೈನ ಧರ್ಮ ಸಾರಿದ ಉದಾತ್ತ ಚಿಂತನೆಯಾಗಿದೆ. ಭಗವಾನ್ ಮಹಾವೀರರ ಸಂದೇಶ ಜೈನ ಧರ್ಮದ ತಳಪಾಯವಾಗಿದ್ದು, ಜೈನತ್ವ ಎನ್ನುವುದು ಹುಟ್ಟಿನಿಂದ ನಿರ್ಧಾರವಾಗುವುದಿಲ್ಲ; ಆಚರಣೆಯಿಂದ ಬರುವಂಥದ್ದು ಎಂದು ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಹೇಳಿದರು.

ಅವರು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವಲಯ 8 ರ ಜುಲೈ ತಿಂಗಳ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಜುಲೈ ತಿಂಗಳ ಮಾಸಿಕ ಸಭೆಯ ಆತಿಥ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರನ್ನು ಘಟಕದ ಹಿರಿಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ ಶೆಟ್ಟಿ ಅಭಿನಂದಿಸಿ, ‘ ಹಣ ಇಲ್ಲದವ ಬಡವನಲ್ಲ. ಕನಸು ಮತ್ತು ಗುರಿ ಇಲ್ಲದವ ಬಡವ,ಧೈರ್ಯ ಮತ್ತು ಆತ್ಮವಿಶ್ವಾಸ ಇದ್ದರೆ ಕಠಿಣ ಗುರಿಯಿದ್ದರೂ ತಲುಪ ಬಹುದು ಎನ್ನುವುದಕ್ಕೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಉದಾಹರಣೆ ‘ ಎಂದರು.

ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಘಟಕದ ಈ ಸಭೆಯಲ್ಲಿ ಭಾರತೀಯ ಜೈನ್ ಮಿಲನ್ ಬೆಳ್ತಂಗಡಿಯ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ವೀರ್ ಶಾಂತಿರಾಜ್ ಜೈನ್ ಪಡಂಗಡಿ ಸ್ವಾಗತಿಸಿದರೆ, ಘಟಕದ ಖಜಾಂಚಿ ವೀರ್ ನಿಕಿತ್ ಕುಮಾರ್ ಜೈನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಘಟಕದ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಇವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸುಮಧುರ ಗಾಯನ ನಡೆಯಿತು.

Related posts

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.14: ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ನಿಟ್ಟಡೆ : ಕುಂಜೊಟ್ಟು ನಿವಾಸಿ ಬೇಬಿ ನಿಧನ

Suddi Udaya

ಸೆ.3: ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಪಟ್ಟಾಭಿಷೇಕ ವರ್ಧಂತಿ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya
error: Content is protected !!