September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

ಬೆಳ್ತಂಗಡಿ: ಅಹಿಂಸಾ ಪರಮೋ ಧರ್ಮ ಎನ್ನುವುದು ಜಗತ್ತಿಗೆ ಜೈನ ಧರ್ಮ ಸಾರಿದ ಉದಾತ್ತ ಚಿಂತನೆಯಾಗಿದೆ. ಭಗವಾನ್ ಮಹಾವೀರರ ಸಂದೇಶ ಜೈನ ಧರ್ಮದ ತಳಪಾಯವಾಗಿದ್ದು, ಜೈನತ್ವ ಎನ್ನುವುದು ಹುಟ್ಟಿನಿಂದ ನಿರ್ಧಾರವಾಗುವುದಿಲ್ಲ; ಆಚರಣೆಯಿಂದ ಬರುವಂಥದ್ದು ಎಂದು ಶಿಕ್ಷಕರಾದ ಅಜಿತ್ ಕುಮಾರ್ ಕೊಕ್ರಾಡಿ ಹೇಳಿದರು.

ಅವರು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವಲಯ 8 ರ ಜುಲೈ ತಿಂಗಳ ಮಾಸಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆಯನ್ನು ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಇದರ ಅಧ್ಯಕ್ಷರಾದ ವೀರ್ ಡಾ ನವೀನ್ ಕುಮಾರ್ ಜೈನ್ ವಹಿಸಿಕೊಂಡಿದ್ದರು.

ಈ ಸಂದರ್ಭದಲ್ಲಿ ಜುಲೈ ತಿಂಗಳ ಮಾಸಿಕ ಸಭೆಯ ಆತಿಥ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ, ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟ ಎಕ್ಸೆಲ್ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಇವರನ್ನು ಘಟಕದ ಹಿರಿಯ ನಿರ್ದೇಶಕರಾದ ವೀರ್ ಬಿ.ಸೋಮಶೇಖರ ಶೆಟ್ಟಿ ಅಭಿನಂದಿಸಿ, ‘ ಹಣ ಇಲ್ಲದವ ಬಡವನಲ್ಲ. ಕನಸು ಮತ್ತು ಗುರಿ ಇಲ್ಲದವ ಬಡವ,ಧೈರ್ಯ ಮತ್ತು ಆತ್ಮವಿಶ್ವಾಸ ಇದ್ದರೆ ಕಠಿಣ ಗುರಿಯಿದ್ದರೂ ತಲುಪ ಬಹುದು ಎನ್ನುವುದಕ್ಕೆ ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಉದಾಹರಣೆ ‘ ಎಂದರು.

ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಘಟಕದ ಈ ಸಭೆಯಲ್ಲಿ ಭಾರತೀಯ ಜೈನ್ ಮಿಲನ್ ಬೆಳ್ತಂಗಡಿಯ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ವೀರ್ ಶಾಂತಿರಾಜ್ ಜೈನ್ ಪಡಂಗಡಿ ಸ್ವಾಗತಿಸಿದರೆ, ಘಟಕದ ಖಜಾಂಚಿ ವೀರ್ ನಿಕಿತ್ ಕುಮಾರ್ ಜೈನ್ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಿರ್ವಹಣೆಯನ್ನು ಘಟಕದ ಕಾರ್ಯದರ್ಶಿಗಳಾದ ಸಂಪತ್ ಕುಮಾರ್ ಇವರು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸುಮಧುರ ಗಾಯನ ನಡೆಯಿತು.

Related posts

ಬಡವರಿಗೆ ವಸತಿ, ನಿವೇಶನ ಕಲ್ಪಿಸಲು ವಿಫಲ: ಲಾಯಿಲ ಗ್ರಾ.ಪಂ. ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಉಜಿರೆ ನ್ಯಾಚುರೋಪತಿ ಕಾಲೇಜು ವತಿಯಿಂದ “ವಿಶ್ವ ತಂಬಾಕು ರಹಿತ ದಿನಾಚರಣೆಯ ಜಾಗೃತ ರ್‍ಯಾಲಿ”

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya
error: Content is protected !!