31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಹೃದಯ ಭಾಗದಲ್ಲಿರುವ ಸಾರ್ವಜನಿಕರ ಬಸ್ಸು ತಂಗುದಾನದಲ್ಲಿ ನಿಲ್ಲಿಸದೆ ಅನಗತ್ಯವಾದ ಜಾಗದಲ್ಲಿ ನಿಲ್ಲಿಸಿ ಮಕ್ಕಳನ್ನು ಬಿಟ್ಟು ಹೋದ ಘಟನೆ ಜು.24 ರಂದು ಬೆಳಿಗ್ಗೆ ನಡೆಯಿತು.


ಬಸ್ಸು ಹತ್ತಲು ಪರದಾಡಿ ಕೊಂಡು ಮಳೆಯಲ್ಲಿ ಒದ್ದೆಯಾಗಿ ಕೆಸರು ನೀರಲ್ಲೇ ಬಸ್ಸಿನ ಹಿಂದೆ ಓಡಿ ಕೊಂಡು ಹೋಗುವಂತ್ತಾಗಿದೆ. ಅದರೂ ಪ್ರಯಾಣಿಕರು ಇಳಿಸಿ, ಮಕ್ಕಳನ್ನು ಹತ್ತಿಸದೆ ಬಸ್ ಮುಂದುವರಿಯುತ್ತದೆ. ಶಾಲಾ ಮಕ್ಕಳು ಹಿಂದಿರುಗಿ ಮುಖ ಚಪ್ಪೆ ಮಾಡಿ, ಕೆಲವರ ಕಣ್ಣಲ್ಲಿ ನೀರು ಬರುವುದನ್ನು ಕಂಡು ನಮ್ಮ ಮನಸ್ಸು ಕರಗುತ್ತದೆ. ಖಾಸಗಿ ಬಸ್ ಹತ್ತಲು ಪರದಾಟ ಪಡುತ್ತಾರೆ. ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಕರು ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಎಲ್ಲರನ್ನೂ ಕರೆದುಕೊಂಡು ಹೋಗುತ್ತಾರೆ.


ಗೇರುಕಟ್ಟೆಯ ಮೂಲಕ ನೂರಾರು ವಿಧ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ, ಸಾರ್ವಜನಿಕರು ಸರಕಾರಿ ಕಚೇರಿಯಲ್ಲಿ ಕೆಲಸದ ನಿಮಿತ್ತ ಹಾಗೂ ಅನಾರೋಗ್ಯ ಪೀಡಿತರು, ವ್ರದ್ದರು ಬೆಳ್ತಂಗಡಿಗೆ ಹೋಗಲು ಕಷ್ಟಕರವಾಗಿದೆ.
ಈಗಾಗಲೇ ಎಲ್ಲಾ ಸರಕಾರಿ ಬಸ್ ಗೇರುಕಟ್ಟೆಯಲ್ಲಿ ನಿಲುಗಡೆಗೆ ಪಂಚಾಯತು ಅನುಮೋದನೆ ದೊರಕಿದೆ. ಅದರೂ ಕೆಲವೊಂದು ಸರಕಾರಿ ಬಸ್ ನಿಲುಗಡೆ ಇರುವುದಿಲ್ಲ.


ಕರ್ನಾಟಕ ರಾಜ್ಯ ರಸ್ತೆ ಸರಕಾರಿ ಬಸ್ಸು ನಿಗಮದವರು ಶಾಲಾ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಜೊತೆ ಚೆಲ್ಲಾಟ ತೋರಿಸುವ ಬದಲಿಗೆ ಮಾನವೀಯತೆ ಮೆರೆದು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸ ಬೇಕು ಎಂದು ಸಾರ್ವಜನಿಕರ ಒತ್ತಾಯ ಆಗಿದೆ.
ವರದಿ: ಕೆ.ಎನ್ ಗೌಡ

Related posts

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡ ರವರ ಮನೆಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪ್ರಮುಖರು ಭೇಟಿ, ಧನಸಹಾಯ ಹಸ್ತಾಂತರ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತೀ ಖರೀದಿಯ ಮೇಲೆ ಶೇ. 20 ರಿಂದ ಶೇ. 50 ವರೆಗೆ ಡಿಸ್ಕೌಂಟ್

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya
error: Content is protected !!