25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಹೃದಯ ಭಾಗದಲ್ಲಿರುವ ಸಾರ್ವಜನಿಕರ ಬಸ್ಸು ತಂಗುದಾನದಲ್ಲಿ ನಿಲ್ಲಿಸದೆ ಅನಗತ್ಯವಾದ ಜಾಗದಲ್ಲಿ ನಿಲ್ಲಿಸಿ ಮಕ್ಕಳನ್ನು ಬಿಟ್ಟು ಹೋದ ಘಟನೆ ಜು.24 ರಂದು ಬೆಳಿಗ್ಗೆ ನಡೆಯಿತು.


ಬಸ್ಸು ಹತ್ತಲು ಪರದಾಡಿ ಕೊಂಡು ಮಳೆಯಲ್ಲಿ ಒದ್ದೆಯಾಗಿ ಕೆಸರು ನೀರಲ್ಲೇ ಬಸ್ಸಿನ ಹಿಂದೆ ಓಡಿ ಕೊಂಡು ಹೋಗುವಂತ್ತಾಗಿದೆ. ಅದರೂ ಪ್ರಯಾಣಿಕರು ಇಳಿಸಿ, ಮಕ್ಕಳನ್ನು ಹತ್ತಿಸದೆ ಬಸ್ ಮುಂದುವರಿಯುತ್ತದೆ. ಶಾಲಾ ಮಕ್ಕಳು ಹಿಂದಿರುಗಿ ಮುಖ ಚಪ್ಪೆ ಮಾಡಿ, ಕೆಲವರ ಕಣ್ಣಲ್ಲಿ ನೀರು ಬರುವುದನ್ನು ಕಂಡು ನಮ್ಮ ಮನಸ್ಸು ಕರಗುತ್ತದೆ. ಖಾಸಗಿ ಬಸ್ ಹತ್ತಲು ಪರದಾಟ ಪಡುತ್ತಾರೆ. ಖಾಸಗಿ ಬಸ್ ಚಾಲಕ ಹಾಗೂ ನಿರ್ವಾಕರು ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎಂಬ ದೃಷ್ಟಿಯಿಂದ ಎಲ್ಲರನ್ನೂ ಕರೆದುಕೊಂಡು ಹೋಗುತ್ತಾರೆ.


ಗೇರುಕಟ್ಟೆಯ ಮೂಲಕ ನೂರಾರು ವಿಧ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ, ಸಾರ್ವಜನಿಕರು ಸರಕಾರಿ ಕಚೇರಿಯಲ್ಲಿ ಕೆಲಸದ ನಿಮಿತ್ತ ಹಾಗೂ ಅನಾರೋಗ್ಯ ಪೀಡಿತರು, ವ್ರದ್ದರು ಬೆಳ್ತಂಗಡಿಗೆ ಹೋಗಲು ಕಷ್ಟಕರವಾಗಿದೆ.
ಈಗಾಗಲೇ ಎಲ್ಲಾ ಸರಕಾರಿ ಬಸ್ ಗೇರುಕಟ್ಟೆಯಲ್ಲಿ ನಿಲುಗಡೆಗೆ ಪಂಚಾಯತು ಅನುಮೋದನೆ ದೊರಕಿದೆ. ಅದರೂ ಕೆಲವೊಂದು ಸರಕಾರಿ ಬಸ್ ನಿಲುಗಡೆ ಇರುವುದಿಲ್ಲ.


ಕರ್ನಾಟಕ ರಾಜ್ಯ ರಸ್ತೆ ಸರಕಾರಿ ಬಸ್ಸು ನಿಗಮದವರು ಶಾಲಾ ವಿಧ್ಯಾರ್ಥಿಗಳ ವಿಧ್ಯಾಭ್ಯಾಸದ ಜೊತೆ ಚೆಲ್ಲಾಟ ತೋರಿಸುವ ಬದಲಿಗೆ ಮಾನವೀಯತೆ ಮೆರೆದು ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸ ಬೇಕು ಎಂದು ಸಾರ್ವಜನಿಕರ ಒತ್ತಾಯ ಆಗಿದೆ.
ವರದಿ: ಕೆ.ಎನ್ ಗೌಡ

Related posts

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya

ಕುಲದೈವೋ ಬ್ರಹ್ಮ ನೂತನ ಯಕ್ಷಗಾನ ಪ್ರಸಂಗ ಬಿಡುಗಡೆ

Suddi Udaya

ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್‌ಇ ಶಾಲೆಗೆ ಶೇ,100 ಫಲಿತಾಂಶ

Suddi Udaya

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ‘ಪೂಜ್ಯ ಪಥ’ ಪೂಜ್ಯರು ‌ನಡೆದು ಬಂದ ಹಾದಿಯ ಕುರಿತಾದ ವಿಶೇಷ ಪುಸ್ತಕ ಮತ್ತು ಸಾಕ್ಷ್ಯಚಿತ್ರ ಪ್ರದರ್ಶನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya
error: Content is protected !!