23.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು ಇವರಿಗೆ ವಾಸ್ತವ್ಯಕ್ಕೆ ಬಹಳ ಕಷ್ಟಕರವಾಗಿತ್ತು.
ಇದನ್ನು ಗಮನಿಸಿದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹರಿಕೃಷ್ಣ ರವರು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು ಪಂಚಾಯತ್ ವತಿಯಿಂದ ಟಾರ್ಪಲ್ ನ್ನು ಒದಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್ ರವರಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಟಾರ್ಪಲ್ ನ್ನು ಹಾಕಿ ದುರಸ್ಥಿ ಮಾಡಿಕೊಡುವ ಸಹಕಾರವನ್ನು ಮನವಿ ಮಾಡಿಕೊಂಡರು.

ಈ ಬಗ್ಗೆ ಮೇಲ್ವಿಚಾರಕರು ಶೌರ್ಯ ಘಟಕದ ಸಂಯೋಜಕರಾದ ವಸಂತಿ ರವರಿಗೆ ತಿಳಿಸಿದಾಗ ತಕ್ಷಣ ಸಂಯೋಜಕರು ಸ್ವಯಂ ಸೇವಕರನ್ನು ಈ ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು. ಕೂಡಲೇ ಘಟಕ ಪ್ರತಿನಿಧಿ ಮಂಜುನಾಥ್, ಒಲ್ವಿನ್ ಡಿಸೋಜ, ಅರ್ವಿನ್ ಮಿರಾಂದ, ವಸಂತ್ ರವರು ಸ್ಥಳಕ್ಕೆ ಧಾವಿಸಿ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಮನೆಯ ದುರಸ್ಥಿ ಕಾರ್ಯಾಚರಣೆ ನಡೆಸಿ ಬಡ ಮಹಿಳೆಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟರು.

Related posts

ಬಂದಾರು: ಬಾಲಂಪಾಡಿಯಲ್ಲಿ ಗುಡ್ಡ ಕುಸಿತ : ಉಮೇಶ್ ರವರ ಮನೆಗೆ ಹಾನಿ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ದ.ಕ. ಜಿಲ್ಲೆಯ ಪ್ರಸಿದ್ಧ ದೇವಾಲಯಗಳು ಮತ್ತು ಇತರ ಸ್ಥಳಗಳಿಗೆ ಸಂಪರ್ಕವನ್ನು ಹೆಚ್ಚಿಸುವ ದೃಷ್ಟಿಯಿಂದ ಎರಡು ಸ್ಪರ್ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸಂಗಮ ಉದ್ಘಾಟನೆ

Suddi Udaya
error: Content is protected !!