25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು ಇವರಿಗೆ ವಾಸ್ತವ್ಯಕ್ಕೆ ಬಹಳ ಕಷ್ಟಕರವಾಗಿತ್ತು.
ಇದನ್ನು ಗಮನಿಸಿದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹರಿಕೃಷ್ಣ ರವರು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು ಪಂಚಾಯತ್ ವತಿಯಿಂದ ಟಾರ್ಪಲ್ ನ್ನು ಒದಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್ ರವರಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಟಾರ್ಪಲ್ ನ್ನು ಹಾಕಿ ದುರಸ್ಥಿ ಮಾಡಿಕೊಡುವ ಸಹಕಾರವನ್ನು ಮನವಿ ಮಾಡಿಕೊಂಡರು.

ಈ ಬಗ್ಗೆ ಮೇಲ್ವಿಚಾರಕರು ಶೌರ್ಯ ಘಟಕದ ಸಂಯೋಜಕರಾದ ವಸಂತಿ ರವರಿಗೆ ತಿಳಿಸಿದಾಗ ತಕ್ಷಣ ಸಂಯೋಜಕರು ಸ್ವಯಂ ಸೇವಕರನ್ನು ಈ ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು. ಕೂಡಲೇ ಘಟಕ ಪ್ರತಿನಿಧಿ ಮಂಜುನಾಥ್, ಒಲ್ವಿನ್ ಡಿಸೋಜ, ಅರ್ವಿನ್ ಮಿರಾಂದ, ವಸಂತ್ ರವರು ಸ್ಥಳಕ್ಕೆ ಧಾವಿಸಿ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಮನೆಯ ದುರಸ್ಥಿ ಕಾರ್ಯಾಚರಣೆ ನಡೆಸಿ ಬಡ ಮಹಿಳೆಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟರು.

Related posts

ನಾಲ್ಕೂರು: ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗೆ ಲಕ್ಷ ದ್ವೀಪದ ಅಧಿಕಾರಿಗಳು ಭೇಟಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಕಂಡುಬರುವ ಬದಲಾವಣೆಯ ಕುರಿತು ಮಾಹಿತಿ

Suddi Udaya

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya
error: Content is protected !!