July 23, 2026
Uncategorized

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು ಇವರಿಗೆ ವಾಸ್ತವ್ಯಕ್ಕೆ ಬಹಳ ಕಷ್ಟಕರವಾಗಿತ್ತು.
ಇದನ್ನು ಗಮನಿಸಿದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹರಿಕೃಷ್ಣ ರವರು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು ಪಂಚಾಯತ್ ವತಿಯಿಂದ ಟಾರ್ಪಲ್ ನ್ನು ಒದಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್ ರವರಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಟಾರ್ಪಲ್ ನ್ನು ಹಾಕಿ ದುರಸ್ಥಿ ಮಾಡಿಕೊಡುವ ಸಹಕಾರವನ್ನು ಮನವಿ ಮಾಡಿಕೊಂಡರು.

ಈ ಬಗ್ಗೆ ಮೇಲ್ವಿಚಾರಕರು ಶೌರ್ಯ ಘಟಕದ ಸಂಯೋಜಕರಾದ ವಸಂತಿ ರವರಿಗೆ ತಿಳಿಸಿದಾಗ ತಕ್ಷಣ ಸಂಯೋಜಕರು ಸ್ವಯಂ ಸೇವಕರನ್ನು ಈ ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು. ಕೂಡಲೇ ಘಟಕ ಪ್ರತಿನಿಧಿ ಮಂಜುನಾಥ್, ಒಲ್ವಿನ್ ಡಿಸೋಜ, ಅರ್ವಿನ್ ಮಿರಾಂದ, ವಸಂತ್ ರವರು ಸ್ಥಳಕ್ಕೆ ಧಾವಿಸಿ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಮನೆಯ ದುರಸ್ಥಿ ಕಾರ್ಯಾಚರಣೆ ನಡೆಸಿ ಬಡ ಮಹಿಳೆಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟರು.

Related posts

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಮಡಂತ್ಯಾರ್ ಸೆಕ್ರೇಡ್ ಹಾರ್ಟ್ ಪದವಿಪೂರ್ವ ಮಹಾವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಉಪಾದ್ಯಕ್ಷರಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!