ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು.

ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮ ಕುಶಲತೆಯನ್ನು ಧರ್ಮಗುರುಗಳಾದ ವಂದನೀಯ ಫಾದರ್ ಶಾಜಿ ಮಾತ್ಯು ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು. ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ವಂದನೀಯ ಸಿಸ್ಟರ್ ಲಿಸ್ ಮಾತ್ಯು ಎಸ್.ಎಚ್., ಟ್ರಸ್ಟಿಗಳಾದ ಅಲೆಕ್ಸ್, ಫಾದರ್ ಎಬಿನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ನಡೆದ ಈ ಸನ್ಮಾನ ಕಾರ್ಯಕ್ರಮವು ಬಿಜು ಅವರ ಸೇವಾ ಮನೋಭಾವನೆಗೆ ಗೌರವ ಸಲ್ಲಿಸುವುದರೊಂದಿಗೆ, ಬರುವ ದಿನಗಳಲ್ಲಿ ಧರ್ಮ ಪ್ರಾಂತ್ಯದ ಇತರರನ್ನು ಸ್ಫೂರ್ತಿ ನೀಡಲು ಕಾರಣವಾಯಿತು.

Related posts

ಹೊಸಂಗಡಿಯ ಪುಲಾಬೆಯಲ್ಲಿ ಬದ್ರಿಯಾ ಮಸ್ಜಿದ್ ಮತ್ತು ಮದರಸ ಉದ್ಘಾಟನೆ

Suddi Udaya

ಜ.16-20: ಗೇರುಕಟ್ಟೆ ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ಪರಪ್ಪು ಉರೂಸ್ ಕಾರ್ಯಕ್ರಮ

Suddi Udaya

ಉಜಿರೆ ಸಿದ್ಧವನ ಗುರುಕುಲದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪೋಷಕರಿಗೆ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಶಿರ್ಲಾಲು: ಭೀಕರ ಮಳೆಗೆ ರಸ್ತೆ ಸಂಪರ್ಕ ಕಡಿದು ಹೋಗುವ ಭೀತಿ

Suddi Udaya
error: Content is protected !!