September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.24ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ರವರು ಮಾತನಾಡಿ ಸರಕಾರದ ಏನೇ ಅನುದಾನ ಇದ್ದಲ್ಲಿ ಪ್ರಾಮಾಣಿಕವಾಗಿ ಅದನ್ನು ದೊರಕಿಸುವಲ್ಲಿ ಕೆಲಸ ಮಾಡುತ್ತೇವೆ. ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಮುಂದಕ್ಕೂ ಬೇಕು ಎಂದರು.

ವೇದಿಕೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ಕುಸುಮ, ಸದಸ್ಯರಾದ ಜನಾರ್ಧನ ಪೂಜಾರಿ, ಗೋಪಾಲ ಶೆಟ್ಟಿ, ಧನಂಜಯ್, ಶ್ರೀಮತಿ ಗೀತಾ, ಶ್ರೀಮತಿ ತೇಜಾಕ್ಷಿ, ಶ್ರೀಮತಿ ಗುಣವತಿ, ಶ್ರೀಮತಿ ರಜನಿ, ದಿನೇಶ್ ಮೂಲ್ಯ, ಶ್ರೀಮತಿ ಪವಿತ್ರ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ನವೀನ್ ಎ ಅನುಪಾಲನ ವರದಿ ವಾಚಿಸಿದರು. ಗ್ರಾ.ಪಂ. ಸಿಬ್ಬಂದಿ ಆನಂದ್ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಡಾ. ಸುಬ್ರಹ್ಮಣ್ಯ ಭಟ್ಟರ ಐತಿಹಾಸಿಕ ಕಾದಂಬರಿ “ಪ್ರತಿಷ್ಠೆ” ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರವರಿಂದ ಬಿಡುಗಡೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya
error: Content is protected !!