25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ ಬಿದ್ದಿದ್ದು. ಘಟನೆ ವೇಳೆ ಬೈಕ್ ಸವಾರರಿಬ್ಬರು ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕಿಳಿದಿರುವ ಘಟನೆ ಗುರುವಾಯನಕೆರೆ ವರಕಬೆಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಕಂಬ ಲಾರಿ ಮೇಲೆ ಬೀಳುವ ವೇಳೆ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದರಿಂದ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದು. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಆಫ್ ಅಗಿದ್ದರಿಂದ ಲಾರಿ ಚಾಲಕ ಹಾಗೂ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪಾರಾಗಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ವತಿಯಿಂದ ಅಂತರ್ ಜಿಲ್ಲಾ ಪುರುಷರ ವಾಲಿಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಮದ್ದಡ್ಕ ತಾಯಿ ಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಾಯಶ್ಚಿತ ಹೋಮ; ದೈವಗಳ ಸಂಕೋಚ ಮಾಡಿ ಬಾಲಾಲಯದಲ್ಲಿ ಪ್ರತಿಷ್ಠೆ

Suddi Udaya
error: Content is protected !!