July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಚಲಿಸುತ್ತಿದ್ದ ಲಾರಿ ಮೇಲೆ ಬಿದ್ದ ವಿದ್ಯುತ್ ಕಂಬ: ಲಾರಿ ಚಾಲಕ ಹಾಗೂ ಎರಡು ಬೈಕ್ ಸವಾರರು ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಮರದ ಗೆಲ್ಲು ವಿದ್ಯುತ್ ತಂತಿ ಮೇಲೆ ಬಿದ್ದ ಪರಿಣಾಮವಾಗಿ ಚಲಿಸುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು. ಈ ವೇಳೆ ರಸ್ತೆಗೆ ವಿದ್ಯುತ್ ತಂತಿಯಿಂದ ಚಲಿಸುತ್ತಿದ್ದ ಬೈಕ್ ಸವಾರರಿಬ್ಬರು ಸ್ಕೀಡ್ ಅಗಿ ಬಿದ್ದಿದ್ದು. ಘಟನೆ ವೇಳೆ ಬೈಕ್ ಸವಾರರಿಬ್ಬರು ಮತ್ತು ಲಾರಿ ಚಾಲಕ ಪ್ರಾಣಾಪಾಯದಿಂದ ಬದುಕಿಳಿದಿರುವ ಘಟನೆ ಗುರುವಾಯನಕೆರೆ ವರಕಬೆಯಲ್ಲಿ ನಡೆದಿದೆ.

ಕುವೆಟ್ಟು ಗ್ರಾಮದ ವರಕಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.24 ರಂದು (ಇಂದು) ಬೆಳಗ್ಗೆ ಮದಡ್ಕ‌‌ ಕಡೆಯಿಂದ ಗುರುವಾಯನಕೆರೆ ಕಡೆ ಬರುತ್ತಿದ್ದ ಲಾರಿ ಮೇಲೆ ವಿದ್ಯುತ್ ಕಂಬ ಏಕಾಏಕಿ ಮುರಿದು ಬಿದ್ದಿದೆ.

ವಿದ್ಯುತ್ ತಂತಿ ಮೇಲೆ ಮರದ ಗೆಲ್ಲು ಬಿದ್ದು ವಿದ್ಯುತ್ ಕಂಬ ಲಾರಿ ಮೇಲೆ ಬೀಳುವ ವೇಳೆ ವಿದ್ಯುತ್ ತಂತಿ ರಸ್ತೆಗೆ ಬಿದ್ದಿದ್ದರಿಂದ ಎರಡು ಬೈಕ್ ಸವಾರರು ಸ್ಕೀಡ್ ಅಗಿ ರಸ್ತೆಗೆ ಬಿದ್ದಿದ್ದು. ಘಟನೆಯಲ್ಲಿ ಬೈಕ್ ಸವಾರರಿಗೆ ಯಾವುದೇ ಗಾಯವಾಗಿಲ್ಲ. ಲಾರಿ ಮೇಲೆ ವಿದ್ಯುತ್‌ ಕಂಬ ಬಿದ್ದಿದ್ದರಿಂದ ಒಂದು ಗಂಟೆ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಘಟನೆಯ ವೇಳೆ ವಿದ್ಯುತ್ ತಂತಿಯಲ್ಲಿ ವಿದ್ಯುತ್ ಆಫ್ ಅಗಿದ್ದರಿಂದ ಲಾರಿ ಚಾಲಕ ಹಾಗೂ ಇಬ್ಬರು ಬೈಕ್ ಸವಾರರು ಅದೃಷ್ಟವಶಾತ್ ಪಾರಾಗಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಅಂಡಿಂಜೆ ಶಾಲೆಯ ವಿದ್ಯಾರ್ಥಿಗಳಾದ ನಮಿಷ ತಾಲೂಕಿಗೆ ಪ್ರಥಮ ಹಾಗೂ ಕು .ಪ್ರಜ್ಞಾ ತಾಲೂಕಿಗೆ ದ್ವಿತೀಯ ಸ್ಥಾನ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪ್ರೌಢ ವಿಭಾಗದ ವಿದ್ಯಾರ್ಥಿನಿಯರಿಗೆ ಹೆಚ್‌ಪಿವಿ ಲಸಿಕೆಯ ಕುರಿತ ಮಾಹಿತಿ ಕಾರ್ಯಗಾರ

Suddi Udaya
error: Content is protected !!